ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ
ಮೈಸೂರು

ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ

September 28, 2020

ನವದೆಹಲಿ,ಸೆ.27-ಆತ್ಮನಿರ್ಭರ ಭಾರತದ ನಿರ್ಮಾಣ ದಲ್ಲಿ ರೈತರ ಪಾತ್ರ ಪ್ರಮುಖವಾಗಿದ್ದು, ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯ ವನ್ನು ರೈತರಿಗೆ ಸರ್ಕಾರ ನೀಡಿದೆ ಎಂದು ಹೇಳುವ ಮೂಲಕ ಕೃಷಿ ಮಸೂದೆಯನ್ನು ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ 69ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯ ಕ್ರಮದಲ್ಲಿ ಮಾತನಾಡುತ್ತ, ಕೃಷಿ ಮಸೂದೆಯ ಲಾಭಗಳನ್ನು ಉಲ್ಲೇಖಿಸಿದರು. ನೂತನ ಮಸೂದೆ ದೇಶದ ಕೃಷಿ ವಲಯದ ಚಹರೆ ಬದಲಿಸಲಿದೆ. ಕೃಷಿ ವಿಧೇಯಕಗಳು ರೈತರ ಪರವಾ ಗಿದ್ದು, ಇವುಗಳ ಲಾಭವನ್ನು ದೇಶದ ರೈತ ಸಮುದಾಯ ಅರಿಯಬೇಕಿದೆ. ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯದ ಬಗ್ಗೆ ಮೋದಿ ರೈತರಿಗೆ ಸಂದೇಶ ನೀಡಿದರು. ಆತ್ಮನಿರ್ಭರ ಭಾರತ ನಿರ್ಮಾಣದ ಪ್ರಯತ್ನಗಳಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ತಮಗೆ ಇಷ್ಟಬಂದ ಜಾಗದಲ್ಲಿ, ಇಷ್ಟಬಂದ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯ ಮತ್ತು ಶಕ್ತಿಯನ್ನು ಪಡೆದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ತಂತ್ರಜ್ಞಾನದ ಹೆಚ್ಚಿನ ಬಳಕೆಯಿಂದ ಕೃಷಿ ಕ್ಷೇತ್ರಕ್ಕೆ ಅಪಾರ ಲಾಭವಾಗಲಿದೆ. ಕೆಲ ವರ್ಷಗಳ ಹಿಂದೆ ಹಲವು ರಾಜ್ಯಗಳಲ್ಲಿ ಎಪಿಎಂಸಿ ಕಾಯ್ದೆಯಿಂದ ತರಕಾರಿ, ಹಣ್ಣುಗಳನ್ನು ಹೊರಗಿಡಲಾಯಿತು. ಇದರಿಂದ ರೈತರು ಲಾಭ ಗಳಿಸಿ ದರು. ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತ ಕೃಷಿ ಕ್ಷೇತ್ರ ಸಾಮಥ್ರ್ಯ ಪ್ರದರ್ಶನ ಮಾಡಿತ್ತು ಎಂದರು. ಇದೇ ವೇಳೆ ಗಾಂಧಿ ತತ್ವದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ನಾವು ಮಹಾತ್ಮ ಗಾಂಧಿಯವರ ಆರ್ಥಿಕ ತತ್ತ್ವ ಶಾಸ್ತ್ರವನ್ನು ಅನುಸರಿಸದಿದ್ದರೆ, ಇಂದು ‘ಆತ್ಮನಿರ್ಭರ ಭಾರತ್’ ಅಭಿಯಾನ ಅಗತ್ಯವಿರಲಿಲ್ಲ. ಭಾರತ ಎಂದೋ ಸ್ವಾವಲಂಬಿಯಾಗುತ್ತಿತ್ತು ಎಂದು ಮೋದಿ ಹೇಳಿದರು.

ಕತೆ ನಿರೂಪಣೆ ಮಹತ್ವ ಸಾರಿದ ಮೋದಿ: ಕತೆ ನಿರೂ ಪಣೆಯು ಶತಮಾನಗಳಿಂದ ನಮ್ಮ ರಾಷ್ಟ್ರದ ಒಂದು ಭಾಗ ವಾಗಿದೆ. ಅದು ನಾಗರಿಕತೆಯಷ್ಟೇ ಹಳೆಯದು. ಇತ್ತೀಚಿನ ದಿನ ಗಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಕಥೆಗಳು ಜನಪ್ರಿಯತೆ ಗಳಿಸುತ್ತಿವೆ. ಅನೇಕರು ಕಥೆ ಹೇಳುವಿಕೆಯನ್ನು ದೇಶಾ ದ್ಯಂತ ಜನಪ್ರಿಯಗೊಳಿಸುತ್ತಿದ್ದಾರೆ ಮತ್ತು ಭಾರತವು ಕಥೆ ಹೇಳುವ ಅದ್ಭುತ ಸಂಪ್ರದಾಯವನ್ನು ಹೊಂದಿದೆ. ಭಾರತದಲ್ಲಿ ಮಕ್ಕಳಿಗೆ ಕಥೆ ಹೇಳುವ ಶ್ರೀಮಂತ ಸಂಪ್ರದಾಯ ಶತಮಾನಗಳಿಂದ ಬೇರೂರಿದ್ದು, ಈ ಸಂಪ್ರದಾಯ ಪೀಳಿಗೆ ಯಿಂದ ಪೀಳಿಗೆಗೆ ವರ್ಗಾವಣೆ ಆಗುತ್ತಲೇ ಇದೆ. ಕಥೆಗಳು ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿ ಸುತ್ತವೆ. ಹೀಗಾಗಿ ಮಕ್ಕಳ ಜ್ಞಾನ ವಿಕಸನಕ್ಕಾಗಿ ಹಿರಿಯರು ಕಥೆಗಳನ್ನು ಹೇಳುತ್ತಿರಬೇಕು. ಎಲ್ಲಾ ಕುಟುಂಬಗಳು, ತಮ್ಮ ನಡುವೆ ಕತೆ ಹೇಳಲು ಸ್ವಲ್ಪ ಸಮಯವನ್ನು ಮೀಸಲಿಡು ವಂತೆ ವಿನಂತಿಸಿದ ಮೋದಿ, ಅದು ಅದ್ಭುತ ಅನುಭವ ನೀಡ ಲಿದೆ ಎಂದರಲ್ಲದೆ, ಬೆಂಗಳೂರಿನ ಕತೆ ನಿರೂಪಣಾ ವೆಬ್‍ಸೈಟ್ Gaathastory.in  ಅನ್ನು ಉಲ್ಲೇಖಿಸಿದರು. ಕೊರೊನಾ ಕಾಲದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಮೋದಿ ಈ ವೇಳೆ ದೇಶವಾಸಿಗಳಲ್ಲಿ ಮನವಿ ಮಾಡಿದರು.

Translate »