ಬಾಳಲೆಯಲ್ಲಿ ಸೌಹಾರ್ದ ಸಮ್ಮೇಳನ ಜಾತಿ, ಧರ್ಮದ ಹೆಸರಿನಲ್ಲಿ ವಿಷ ಬೀಜ  ಬಿತ್ತುವವರನ್ನು ದೂರವಿಡಬೇಕು
ಕೊಡಗು

ಬಾಳಲೆಯಲ್ಲಿ ಸೌಹಾರ್ದ ಸಮ್ಮೇಳನ ಜಾತಿ, ಧರ್ಮದ ಹೆಸರಿನಲ್ಲಿ ವಿಷ ಬೀಜ  ಬಿತ್ತುವವರನ್ನು ದೂರವಿಡಬೇಕು

December 1, 2018

ಗಮನ ಸೆಳೆದ ಮಕ್ಕಳ ದಫ್ ಸಾಂಸ್ಕøತಿಕ ಕಾರ್ಯಕ್ರಮ
ಗೋಣಿಕೊಪ್ಪಲು: ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವವರನ್ನು ಸಮಾಜ ದೂರವಿಡಬೇಕೆಂದು ಕೊಡಗು ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು.

ದಕ್ಷಿಣ ಕೊಡಗಿನ ಬಾಳೆಲೆ ಗ್ರಾಮದಲ್ಲಿರುವ ನುಸ್ರತುಲ್ ಇಸ್ಲಾಂ ಜುಮಾ ಮಸ್ಜಿದ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಲೋಕ ಅನುಗ್ರಹಿ ಮಹಮ್ಮದ್ ಮುಸ್ತಫರವರ 1493ನೇ ಜನ್ಮ ದಿನಾಚರಣೆ ಅಂಗ ವಾಗಿ ನೂರೇ ಮದೀನ ಈದ್ ಮಿಲಾದ್ ಪ್ರಯುಕ್ತ ಸೌಹಾರ್ದ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ಇಂದು ಜಾತಿ, ಧರ್ಮದ ವಿಚಾರದಲ್ಲಿ ಪರಸ್ಪರ ಪ್ರೀತಿ ಬಾಂಧವ್ಯಗಳು ಹಾಳಾಗುತ್ತಿವೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳುವ ರಾಜಕಾರಣಿಗಳಿಂದ ದೇಶದಲ್ಲಿ ಶಾಂತಿ ಕಾಪಾಡಲು ಸಾಧ್ಯವಾಗುತ್ತಿಲ್ಲ. ಇಂತಹ ಸೌಹಾರ್ದ ಕಾರ್ಯಕ್ರಮಗಳ ಮೂಲಕ ನಾವುಗಳು ಚಿಂತ ನಾಶೀಲರಾಗಿ ಬದಲಾವಣೆಯಾಗಬೇಕು.
ವೇದಿಕೆಯಲ್ಲಿ ಬಂದು ಮಾತನಾಡುವ ಜನ ತಾನು ಮಾತ ನಾಡಿದನ್ನು ವೇದಿಕೆಯಿಂದ ಇಳಿಯುವ ಸಮಯ ಮರೆಯುತ್ತಾರೆ. ಮಾನವೀಯತೆ ಮರೆಯಾಗುತ್ತಿದೆ. ಧರ್ಮದ ವಿಚಾರದಲ್ಲಿ ವಿಷ ಬೀಜ ಬಿತ್ತುವವರನ್ನು ಸಮಾಜ ದೂರ ವಿಡಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಪಣ ತೊಡಬೇಕೆಂದು ಕರೆ ನೀಡಿದರು.

ಬಾಳಲೆಯ ಜುಮಾ ಮಸೀದಿ ಅಧ್ಯಕ್ಷ ಎಂ.ಎಂ. ಫಯಾಝ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಬಾಳೆಲೆ ಜುಮಾ ಮಸೀದಿಯ ಖತಿಬರಾದ ಝೈನುದ್ದೀನ್‍ರವರು ಉದ್ಘಾಟಿಸಿದರು. ಮುಖ್ಯ ಭಾಷಣಕಾರರಾಗಿ ಕೊಳಕೇರಿಯ ಶುಹೈಬ್ ಫೈಝಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಬಾಳಲೆ ಕೃಷಿ ಪತ್ತಿನ ಸಹಕಾರ ಸಂಘದ ಅದ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಸೌಹಾರ್ದತೆ ಯಿಂದ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷದ ವಿಷಯ. ಮುಸ್ಲಿಂ ಬಾಂಧವರು ಇಲ್ಲದ ಭಾರತ ನಿರ್ಮಾಣ ಸಾಧ್ಯವಾಗದು. ನಾವೆಲ್ಲರು ಸ್ನೇಹ,ಸಹಬಾಳ್ವೆಯಿಂದ ಜೀವನ ಸಾಗಿಸಬೇಕು. ಮತ್ತೊ ಬ್ಬರಿಗೆ ಸಹಕಾರಿಯಾಗಿ ಬದುಕಬೇಕು ಎಲ್ಲ ಧರ್ಮದ ಮೂಲ ಗಳು ಒಂದೇ ಆಗಿವೆ ಎಂದರು. ಬಾಳಲೆ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಬಾನಂಡ ಪ್ರಥ್ವಿ, ಅರಮಣಮಾಡ ಸತೀಶ್ ದೇವಯ್ಯ ಮಾತನಾಡಿದರು.
ಬಾಳೆಲೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಕೆ.ಬಿ.ಮಹೇಶ್ ಕುಮಾರ್, ಸದಸ್ಯ ಪೋಡಮಡ ಸುಖೇಶ್ ಭೀಮಯ್ಯ, ಮಾಜಿ ಸದಸ್ಯ ಆದೇಂಗಡ ವಿನು ಉತ್ತಪ್ಪ ಮಾತನಾಡಿದರು. ವೇದಿಕೆಯಲ್ಲಿ ಪೊನ್ನಂ ಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು ಜೆಡಿಎಸ್‍ನ ಮುಖಂಡರಾದ ಮಲ್ಚಿರ ದೇವಯ್ಯ, ಬಾಳಲೆ ಜಮಾಹತ್ ಸ್ವಲಾತ್ ಕಮಿಟಿಯ ಪ್ರ.ಕಾರ್ಯದರ್ಶಿ ಟಿ.ಎ.ಸಂಶುದ್ದೀನ್, ಕಾರ್ಯದರ್ಶಿ ಅಬ್ದುಲ್ಲ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Translate »