ರಾಜ್ಯದ ಪ್ರಗತಿ, ಎಲ್ಲಾ ವರ್ಗಕ್ಕೆ  ನ್ಯಾಯ ಕಲ್ಪಿಸುವ ಬಜೆಟ್
News

ರಾಜ್ಯದ ಪ್ರಗತಿ, ಎಲ್ಲಾ ವರ್ಗಕ್ಕೆ ನ್ಯಾಯ ಕಲ್ಪಿಸುವ ಬಜೆಟ್

February 23, 2022

ಬೆಂಗಳೂರು, ಫೆ.22(ಕೆಎಂಶಿ)- ರಾಜ್ಯದ ಅಭಿವೃದ್ಧಿಯನ್ನು ಬಿಂಬಿಸುವ ಜನಪರ ಬಜೆಟ್ ಮಂಡಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ವಿಧಾನ ಸಭೆಯಲ್ಲಿಂದು ಪ್ರಕ ಟಿಸಿದ್ದಾರೆ. ರಾಜ್ಯ ಪಾಲರ ಭಾಷಣಕ್ಕೆ ವಂದನಾ ನಿರ್ಣ ಯದ ಪ್ರಸ್ತಾವದ ಮೇಲೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲಾ ವರ್ಗದವರಿಗೆ ನ್ಯಾಯ ಒದಗಿ ಸುವ ಮುಂಗಡ ಪತ್ರ ಇದಾಗಿರುತ್ತದೆ ಎಂದರು. ರಾಜ್ಯಪಾಲರ ಭಾಷಣದ ಮೇಲೆ ವಿಸ್ತøತ ಚರ್ಚೆ ನಡೆದಿದ್ದರೆ ಸರ್ಕಾರವನ್ನು ಅಭಿವೃದ್ಧಿ ಕಾರ್ಯಕೈಗೊಳ್ಳಲು ಮತ್ತಷ್ಟು ಪ್ರೇರೇಪಿಸಬಹುದಿತ್ತು. ಆದರೆ ಪ್ರತಿಪಕ್ಷ ಕಾಂಗ್ರೆಸ್ ಚರ್ಚೆಗೆ ಅವಕಾಶ ನೀಡದೆ ಧರಣಿಗೆ ಸೀಮಿತವಾದದ್ದು ಬಹಳ ನೋವು ಉಂಟು ಮಾಡಿದೆ. ಪ್ರಮುಖ ಪ್ರತಿಪಕ್ಷದ ಸದಸ್ಯರ ಧರಣಿ, ಗದ್ದಲದ ನಡುವೆಯೇ ಮುಖ್ಯಮಂತ್ರಿ ಅವರು, ತಮ್ಮ ಚೊಚ್ಚಲ ಬಜೆಟ್‍ನ ಸ್ವರೂಪವನ್ನು ಬಿಚ್ಚಿಟ್ಟರು. ನಾನು ಅಧಿಕಾರ ವಹಿಸಿಕೊಂಡ ನಂತರ ಕೋವಿಡ್, ಪ್ರವಾಹದಂತಹ ಸಂಕಷ್ಟದ ಸ್ಥಿತಿಯಲ್ಲೂ ರಾಜ್ಯದ ಅಭಿ ವೃದ್ಧಿಗೆ ಎಲ್ಲಿಯೂ ಹಿನ್ನಡೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿತು. ಆಡಳಿತ ಸುಧಾರಣೆಗೆ ಎರಡು ವರದಿಗಳನ್ನು ತೆಗೆದುಕೊಂಡಿದ್ದೇವೆ. ಉದ್ಯೋಗ ನೀತಿ, ಸೆಮಿ ಕಂಡಕ್ಟರ್ ನೀತಿಯಂತಹ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಸಹ ನಡೆಸಲಾಗು ವುದು ಎಂದು ತಿಳಿಸಿದರು. ನಮ್ಮ ಸರ್ಕಾರ ಹತ್ತು ಹಲವು ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಜಾರಿ ಮಾಡಿದೆ. ಕೃಷಿ, ಉದ್ಯೋಗ, ಉದ್ಯಮ, ಸೇವೆ, ಪ್ರಗತಿ ನಮ್ಮ ಸರ್ಕಾರದ ಸಾಧನೆಗಳಾಗಿವೆ. ಈಗ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿದೆ ಎಂದು ಪ್ರಶಂಸಿಸಿದರು.

ಮೊದಲ ಕೋವಿಡ್ ಅಲೆ ಬಂದಾಗ ಹೊಸ ಸಮಸ್ಯೆ ಎದುರಾಗಿತ್ತು. ಅಂತಹ ಸಂದರ್ಭದಲ್ಲೂ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧೃತಿಗೆಡದೆ ಜನರ ಜೀವ ಉಳಿಸಲು ವಿಶೇಷ ಕಾರ್ಯಪಡೆ ರಚಿಸಿ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಅನುದಾನ ಒದಗಿಸಿದರು. 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿತ್ತು. ನಮ್ಮ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಬೆಡ್, ಔಷಧÀ, ವೆಂಟಿಲೇಟರ್, ಐಸಿಯು, ಐಸಿಯು ವೆಂಟಿಲೇಟರ್ ಬೆಡ್‍ಗಳು, ಕೋವಿಡ್ ಸೋಂಕಿತರಿಗೆ ಔಷಧಗಳು, ಆಂಬುಲೆನ್ಸ್, ಮೃತಪಟ್ಟವರಿಗೆ ಉತ್ತಮ ರೀತಿಯಲ್ಲಿ ಶವ ಸಂಸ್ಕಾರ ನಡೆಸಿಕೊಟ್ಟ ಸರ್ಕಾರ ನಮ್ಮದು ಎಂದರು. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಎಲ್ಲ ರೀತಿಯಲ್ಲಿ ಸಹಕಾರ ಕೊಟ್ಟರು, ಎಲ್ಲ ಅಡೆತಡೆಗಳ ನಡುವೆಯೂ ನಾವು ಒಂದು ಮತ್ತು 2ನೇ ಕೋವಿಡ್ ಅಲೆಯನ್ನು ಯಶಸ್ವಿಯಾಗಿ ನಿರ್ವಹಿಸಿದೆವು. ಮೂರನೇ ಅಲೆ ಬಂದರೂ ಸರ್ವಸನ್ನದ್ಧರಾಗಿದ್ದೇವೆ. ಐಸಿಯು, ವೆಂಟಿಲೇಟರ್, ಐಸಿಯು ವೆಂಟಿಲೇಟರ್ ಬೆಡ್‍ಗಳು, ಕೋವಿಡ್ ಸೋಂಕಿತರಿಗೆ ಔಷಧಗಳು, ಆಂಬುಲೆನ್ಸ್ ಯಥೇಚ್ಛವಾಗಿ ಲಭ್ಯವಿದೆ. ಈಗ ಯಾವುದೇ ಆತಂಕವಿಲ್ಲ ಎಂದು ತಿಳಿಸಿದರು. ತಮ್ಮ ಜೀವದ ಹಂಗು ತೊರೆದು ಆಶಾ, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೆÇಲೀಸ್ ಇಲಾಖೆಯವರು ಕೈಜೋಡಿಸಿದ ಪರಿಣಾಮ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದೆವು. ಇಂದು ನಾವು 1200 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಮಾಡುವ ಸಾಮಥ್ರ್ಯ ಹೊಂದಿದ್ದೇವೆ. ಈ ಸದನದ ಮೂಲಕ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕೋವಿಡ್‍ನಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ ಒಂದು ಲಕ್ಷ, ಕೇಂದ್ರ 50 ಸಾವಿರ ಸೇರಿದಂತೆ ಒಂದೂವರೆ ಲಕ್ಷ ಪರಿಹಾರ ನೀಡಿದ್ದೇವೆ. ಬಡವರು, ಶ್ರಮಿಕರು, ಗಾರ್ಮೆಂಟ್ ನೌಕರರು, ಹೂವು ಮಾರಾಟಗಾರರು, ನೇಕಾರರು ಸೇರಿದಂತೆ ಪ್ರತಿಯೊಂದೂ ಸಮುದಾಯಕ್ಕೆ ವಿಶೇಷ ಆರ್ಥಿಕ ನೆರವು, ಫುಡ್‍ಕಿಟ್ ವಿತರಣೆ ಮಾಡಲಾಗಿದೆ. ಅತ್ಯುತ್ತಮವಾಗಿ ಕೋವಿಡ್ ನಿರ್ವಹಣೆ ಮಾಡಿದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಪ್ರಶಂಸಿಸಿದರು. ಆರೋಗ್ಯದ ಸಮಸ್ಯೆ ಎದುರಾಗದಂತೆ ಮುಂಗಡವಾಗಿ ಪಡಿತರ ಧಾನ್ಯಗಳು ಹಾಗೂ ಫುಡ್‍ಕಿಟ್‍ಗಳನ್ನು ಸಹ ನೀಡಲಾಗಿದೆ. ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಖುದ್ದು ಭೇಟಿ ಕೊಟ್ಟು ಪರಿಶೀಲಿಸಿದ್ದೆ ಎಂದು ಹೇಳಿದರು. ಎನ್‍ಡಿಆರ್‍ಎಫ್‍ನ ಮಾರ್ಗಸೂಚಿಯನ್ನು ಬದಿಗೊತ್ತಿ ಮಳೆಯಾಶ್ರಿತ ಬೆಳೆಗಳಿಗೆ ಒಂದು ಹೆಕ್ಟೇರ್ 6800ರಿಂದ 13600 ಒದಗಿಸಿದ್ದೇವೆ ಎಂದು ಮಾಹಿತಿ ನೀಡಿದರು. ಒಟ್ಟು 1262 ಕೋಟಿ ರೈತರ ಖಾತೆಗೆ ಪರಿಹಾರವನ್ನು ಜಮೆ ಮಾಡಲಾಗಿದೆ. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 500 ಕೋಟಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಈವರೆಗೆ 1180 ಕೋಟಿ ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ರೈತರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆಯನ್ನು ಆರಂಭಿಸಿದೆವು. ಸುಮಾರು 4.5 ಲಕ್ಷ ಮಕ್ಕಳು ಇದರ ಲಾಭ ಪಡೆದಿದ್ದಾರೆ ಎಂದು ವಿವರಿಸಿದರು. ಕರ್ನಾಟಕ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನ ಅಭಿವೃದ್ಧಿಗೆ 6 ಸಾವಿರ ಕೋಟಿ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ 3,357 ಕೋಟಿ ಅನುದಾನವನ್ನು ಒದಗಿಸಿದ್ದೇವೆ.

ಪರಿಶಿಷ್ಟ ಜಾತಿ, ಪಂಗಡದವರಿಗೆ ವಿಶೇಷ ಕಾರ್ಯಕ್ರಮಗಳು, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಲಾಗಿದೆ. ಸ್ತ್ರೀ ಶಕ್ತಿ ಸಂಘಟನೆಗಳಿಗೂ ಸಹ ಅನುದಾನವನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟು 5 ಲಕ್ಷ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ನಗರ ಪ್ರದೇಶಗಳಲ್ಲಿ 1 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಅಮೃತ್ ಗ್ರಾಮ ಯೋಜನೆಯಡಿ ಗ್ರಾಮ-ಒನ್ ಯೋಜನೆ ಆರಂಭವಾಗಿದೆ. ಪ್ರತಿಯೊಂದು ಗ್ರಾಪಂಗಳಲ್ಲಿ ಸರ್ಕಾರದ ಒಟ್ಟು 100 ಸೇವೆಗಳು ಜನರಿಗೆ ಲಭ್ಯವಾಗಲಿದೆ. ಇದರಿಂದ ಭ್ರಷ್ಟಾಚಾರ ನಿರ್ಮೂಲನೆಯಾಗಿ ಜನರಿಗೆ ಇಲಾಖೆಯಿಂದ ಇಲಾಖೆಗೆ ಅಲೆಯುವ ಸಂಕಟ ತಪ್ಪುತ್ತದೆ. ಇದು ನಮ್ಮ ಸರ್ಕಾರದ ಸಾಧನೆ ಎಂದು ಹೇಳಿದರು. ಪ್ರಧಾನಿಗಳ ಮಹತ್ವಾಕಾಂಕ್ಷಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದ ಮೊದಲ ರಾಜ್ಯ ಕರ್ನಾಟಕ. ಇದರಿಂದ ಪ್ರಾಥಮಿಕ ಮತ್ತು ಮಾಧ್ಯಮ ಶಿಕ್ಷಣ ನೀತಿಯಲ್ಲಿ ಅನೇಕ ಮಹತ್ವದ ಬದಲಾವಣೆಯಾಗಲಿದೆ. ಬಿಪಿಎಲ್‍ನವರಿಗೆ ನೀಡುತ್ತಿದ್ದ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಜೊತೆಗೆ ರಾಗಿ, ಜೋಳವನ್ನು ಸಹ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

Translate »