ಹಸು ಕಳ್ಳನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಕೊಡಗು

ಹಸು ಕಳ್ಳನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

December 11, 2018

ಸಿದ್ದಾಪುರ:  ಮಾಲ್ದಾರೆ ಸಮೀಪದ ಕಲ್ಲಳ್ಳ ಭಾಗದಲ್ಲಿ ಹಸು ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು ಧರ್ಮದೇಟು ನೀಡಿ ಪೆÇಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ ತೋಲ್‍ಪಟ್ಟಿ ನಿವಾಸಿ ಅಬುತಾಹಿರ್ ಎಂಬಾತ ಕಲ್ಲಳ್ಳ ಗ್ರಾಮದ ಪುಷ್ಪ ಎಂಬುವರಿಗೆ ಸೇರಿದ ಹಸು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ಮನೆಯ ಸಮೀಪ ಮೇಯಲು ಬಿಟ್ಟಿದ್ದ ಹಸುವನ್ನು ಹಿಡಿದುಕೊಂಡು ಹೋಗುತ್ತಿದ್ದ ಸಂದರ್ಭ ಮಾಹಿತಿ ತಿಳಿದ ಗ್ರಾಮಸ್ಥರು ಧರ್ಮದೇಟು ನೀಡಿ ಪೆÇಲೀಸರಿಗೆ ಒಪ್ಪಿಸಿದ್ದಾರೆ
ವಾಹನ ಒಂದರಲ್ಲಿ ಬಂದಿದ್ದ ಮೂವರ ಪೈಕಿ ಅಬುತಾಹಿರ್ ಸಿಕ್ಕಿ ಬಿದ್ದಿದ್ದಾನೆ ಇಬ್ಬರು ವಾಹನದೊಂದಿಗೆ ಪರಾರಿಯಾಗಿದ್ದಾರೆ. ಮಾಲ್ದಾರೆ, ಕಲ್ಲಳ್ಳ, ಚೆನ್ನೈನ ಕೋಟೆ, ಬಾಡಗ ಬಾಣಂಗಾಲ ಸೇರಿದಂತೆ ಹಲವೆಡೆ ಕಳೆದ ಒಂದು ವರ್ಷಗಳಿಂದಲೂ ದನಗಳು ಕಾಣೆಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಪೆÇಲೀಸರಿಗೆ ದೂರು ನೀಡಿದ್ದಾರೆ.

ಶನಿವಾರ ರಾತ್ರಿ ಚೆನ್ನೈನ ಕೋಟೆ ಮಂಜು ಎಂಬುವರಿಗೆ ಸೇರಿದ ಮೂರು ದನಗಳು ಕಾಣಿಯಾಗಿದ್ದು, ಪೆÇಲೀಸರಿಗೆ ದೂರು ನೀಡಿದ್ದಾರೆ. ನಿರಂತರವಾಗಿ ಜಾನುವಾರು ಕಳ್ಳತನ ಮಾಡುತ್ತಿರುವ ಕಳ್ಳರನ್ನ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೆÇಲೀಸ್ ಠಾಣೆ ಮುಂದೆ ಜಮಾಯಿಸಿದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Translate »