ಸಿದ್ದಾಪುರ ಸುತ್ತಮುತ್ತಲ ಗ್ರಾಮಗಳು ಸಂಪೂರ್ಣ ಬಂದ್ ಅನಗತ್ಯ ಸುತ್ತಾಡುತ್ತಿದ್ದವರಿಗೆ ಬಿತ್ತು ಲಾಠಿ ರುಚಿ
ಕೊಡಗು

ಸಿದ್ದಾಪುರ ಸುತ್ತಮುತ್ತಲ ಗ್ರಾಮಗಳು ಸಂಪೂರ್ಣ ಬಂದ್ ಅನಗತ್ಯ ಸುತ್ತಾಡುತ್ತಿದ್ದವರಿಗೆ ಬಿತ್ತು ಲಾಠಿ ರುಚಿ

April 26, 2021

ಸಿದ್ದಾಪುರ, ಏ.25- ಕೊರೋನಾ ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಾರಾಂತ್ಯದ 2ನೇ ದಿನದ ಕಫ್ರ್ಯೂ ಘೋಷಣೆಗೆ ಸಿದ್ದಾಪುರ, ನೆಲ್ಯಹುದಿಕೇರಿ, ಪಾಲಿಬೆಟ್ಟ, ಅಮ್ಮತ್ತಿ, ಚೆನ್ನಯ್ಯನಕೋಟೆ, ಮಾಲ್ದಾರೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲೂ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟಗಳನ್ನು ಮುಚ್ಚಿ ಕಫ್ರ್ಯೂ ಬಂದ್‍ಗೆ ಸಾರ್ವಜನಿಕರು ಹಾಗೂ ವರ್ತಕರು ಸಹಕರಿಸಿದರು.

ವೈದ್ಯಕೀಯ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಿತ್ತು. ಆಸ್ಪತ್ರೆ ಸೇರಿದಂತೆ ತುರ್ತು ಸಂದರ್ಭಕ್ಕೆ ಸೀಮಿತವಾದ ವಾಹನಗಳು ಮಾತ್ರ ಓಡಾಟವಿತ್ತು. ಸಿದ್ದಾಪುರ ಠಾಣಾಧಿಕಾರಿ ಮೋಹನ್‍ರಾಜ್ ನೇತೃತ್ವದಲ್ಲಿ ಎಲ್ಲೆಡೆ ಪೆÇಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಿದ್ದಾಪುರ ಸೇರಿದಂತೆ ಹಲವೆಡೆ ಕೆಲವು ಬೈಕ್ ಹಾಗೂ ವಾಹನ ಸವಾರರು ಅನವಶ್ಯಕವಾಗಿ ಸುತ್ತಾಟ ಮಾಡುತ್ತಿರು ವುದನ್ನು ಕಂಡ ಪೆÇಲೀಸರು ಕೆಲವರಿಗೆ ಲಾಠಿ ಬೀಸಿದರು.

ಸಾರ್ವಜನಿಕರು ಮನೆಯಿಂದ ಹೊರ ಬರದೇ ಮುಖ್ಯ ರಸ್ತೆಗಳು ಬಿಕೋ ಎನ್ನು ತ್ತಿತ್ತು, ಬೆಳಿಗ್ಗೆ 10 ಗಂಟೆಯವರೆಗೆ ದಿನಸಿ, ತರಕಾರಿ, ಕೋಳಿ ಮಾಂಸದಂಗಡಿಗಳು ತೆರೆದಿದ್ದವು. ಸಿದ್ದಾಪುರ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಿಂದ ಪಟ್ಟಣಕ್ಕೆ ಬಂದು ಅಗತ್ಯ ಸಾಮಗ್ರಿಗಳನ್ನು ಖರೀದಿಸಿ ತೆರಳಿದರು. ಪೆÇಲೀಸ್ ವಾಹನದಲ್ಲಿ ಧ್ವನಿವರ್ಧಕ ಬಳಸಿ ಸಾಮಾಜಿಕ ಅಂತರ ಹಾಗೂ ನಿಯಮ ಪಾಲನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜನರಲ್ಲಿ ಮನವಿ ಮಾಡಿದರು. 10 ಗಂಟೆ ಯಾಗುತ್ತಿದ್ದಂತೆ ಎಲ್ಲ ಅಂಗಡಿ ಮುಂಗಟ್ಟು ಗಳನ್ನು ಬಂದ್ ಮಾಡಿ ಸಹಕರಿಸಿದರು.

Translate »