ಬಿಜೆಪಿಯವರಿಗೆ ಯಾವುದೇ ನಿಯಂತ್ರಣ ಇಲ್ಲವಾಗಿದೆ: ಡಿಕೆಶಿ
ಮೈಸೂರು

ಬಿಜೆಪಿಯವರಿಗೆ ಯಾವುದೇ ನಿಯಂತ್ರಣ ಇಲ್ಲವಾಗಿದೆ: ಡಿಕೆಶಿ

November 12, 2020

ಬೆಂಗಳೂರು, ನ.11(ಕೆಎಂಶಿ)- ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂ ತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯು ತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಗೂಂಡಾಗಿರಿ ಮಾಡಿ ಅಧಿಕಾರವನ್ನು ಬಿಜೆಪಿ ಪಡೆದುಕೊಳ್ಳುತ್ತಿದೆ ಎಂದು ದೂರಿದರು.

ಬಹುಮತ ಇಲ್ಲದಿದ್ದರೂ ಸಂಬಂಧಪಟ್ಟ ಪುರಸಭೆ, ನಗರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಅಲ್ಲಿನ ಶಾಸಕರು ಇಲ್ಲವೆ ಬಿಜೆಪಿ ಮುಖಂಡರು ವಿರೋಧ ಪಕ್ಷಗಳ ಕಾರ್ಯಕರ್ತರು ಮತ್ತು ಸದಸ್ಯರ ಮೇಲೆ ದೌರ್ಜನ್ಯ ಎಸಗಿ ಅಧಿಕಾರ ಹಿಡಿಯುತ್ತಿದ್ದಾರೆ.

ಇದು ಬಿಜೆಪಿಯ ಸಂಸ್ಕೃತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾರ್ಪೊರೇಟರ್‍ನಿಂದ ಕೌನ್ಸಿಲರ್‍ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಪೊಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇವರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ನಾವು ಕಾದು ನೋಡುತ್ತಿದ್ದೇವೆ. ಇವರ ಕ್ರಮದ ನಂತರ ನಾವು ಮಾತನಾಡುತ್ತೇವೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡುತ್ತೇನೆ ಎಂದರು.

 

 

Translate »