ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ
ಮೈಸೂರು

ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ

June 15, 2020

ಕಲಬುರಗಿ, ಜೂ.14- ಕರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಕಲ ಬುರಗಿ ನಗರದ ದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಹೇಳಿದರು.

ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಲ್ಲ. ಎಲ್ಲಾ ವ್ಯವಸ್ಥೆಗಳನ್ನು ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ ಎಂದ ಅವರು, ಶಂಕಿತ ಜನರ ಗಂಟಲು ದ್ರವದ ಮಾದರಿಯ ವರದಿ ಬರುವ ಮುನ್ನವೇ ಜನರನ್ನು ತಮ್ಮ ಮನೆಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಅವರು ಸಮರ್ಥಿಸಿಕೊಂಡರು. ವ್ಯಕ್ತಿಯು ಯಾವುದೇ ರೋಗ ಲಕ್ಷಣಗಳನ್ನು ಹೊಂದುವುದಿಲ್ಲದಿದ್ದರೆ ಸಾಂಕ್ರಾಮಿಕ ರೋಗ ಕೊರೋನಾ ಹರಡುವ ಸಾಧ್ಯತೆಗಳು ಕಡಿಮೆ ಎಂದು ಡಬ್ಲ್ಯುಎಚ್‍ಒ ಸ್ಪಷ್ಟಪಡಿಸಿದೆ ಎಂದು ಸಚಿವರು ಹೇಳಿದರು. ಈಗ, ಮಹಾರಾಷ್ಟ್ರ ಮತ್ತು ವಿದೇಶಗಳಿಂದ ಆಗಮಿಸುವವರನ್ನು ಮಾತ್ರ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ ಎಂದು ಡಾ.ಸುಧಾಕರ್ ಮಾಹಿತಿ ನೀಡಿದರು.

Translate »