ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಮೈಸೂರು

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

February 5, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹತಾಶರಾಗಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಇದರಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪಾತ್ರವೇನೂ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದ ನಂತರ ಯಡಿಯೂ ರಪ್ಪ ಅವರು ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿದ್ದಾರೆ. ಸಹಜವಾಗಿಯೇ ಇದು ಅವರಿಗೆ ನೋವು ತಂದಿದೆ ಎಂದರು. ಹೀಗಾಗಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿ ಸುತ್ತಿದ್ದಾರೆ. ಆದರೆ ಅದು ವಿಫಲ ಯತ್ನವಾಗಲಿದೆ.ಹಾಗೆಯೇ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿವರಿಸಿದರು. ಪಾಪ, ಸರ್ಕಾರ ಉರುಳಿಸಲು ಯಡಿಯೂರಪ್ಪ ಮತ್ತು ರಾಜ್ಯ ಘಟಕದ ನಾಯಕರು ನಡೆಸುತ್ತಿರುವ ಪ್ರಯತ್ನ ಇದು.ಈ ಪ್ರಯತ್ನಕ್ಕೂ ಪ್ರಧಾನಿ ನರೇಂದ್ರಮೋದಿ ಅವರಿಗೂ ಸಂಬಂಧವಿದೆ ಎಂದು ನನಗನ್ನಿಸುತ್ತಿಲ್ಲ ಎಂದು ನುಡಿದರು. ಅವರ ಪಾತ್ರವೇ ಇಲ್ಲದೆ ಇರುವುದರಿಂದ ನಾನು ಅವರ ಬಗ್ಗೆ ಏನೂ ಮಾತನಾಡಲಾರೆ.ಆದರೆ ಯಡಿಯೂರಪ್ಪ ಅವರ ಪ್ರಯತ್ನಕ್ಕೂ ಕಾರಣವಿದೆ.ಅದು ಅವರಿಗಾಗಿರುವ ಹತಾಶೆ ಎಂದು ವ್ಯಂಗ್ಯವಾಡಿದರು.

Translate »