ಇಂದು ಶಾಸಕ ನಾಗೇಂದ್ರರಿಂದ  ಫೋನ್ ಇನ್ ಕಾರ್ಯಕ್ರಮ
ಮೈಸೂರು

ಇಂದು ಶಾಸಕ ನಾಗೇಂದ್ರರಿಂದ ಫೋನ್ ಇನ್ ಕಾರ್ಯಕ್ರಮ

April 26, 2021

ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಕುಂದುಕೊರತೆ ಆಲಿಕೆ
ಮೈಸೂರು,ಏ.25(ಪಿಎಂ)- ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರ ಸಂಬಂಧ ಕೋವಿಡ್-19 ಸೇರಿದಂತೆ ಸಾರ್ವಜನಿಕರ ಕುಂದು ಕೊರತೆ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಏಪ್ರಿಲ್ 26ರಂದು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಶಾಸಕರು ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಶಾಸಕರ ಕಚೇರಿ ದೂರವಾಣಿ ಸಂಖ್ಯೆ 0821-2416199 ಅನ್ನು ಸಂಪರ್ಕಿಸಿ ಸಾರ್ವಜನಿಕರು ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದು. ಕೋವಿಡ್-19 ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಪಾದಯಾತ್ರೆ ಮೂಲಕ ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದು ಆಲಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಈ ಕಾರಣಕ್ಕೆ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಇಲಾಖಾಧಿಕಾರಿ ಗಳೊಂದಿಗೆ ಸಮನ್ವಯ ಸಾಧಿಸಿ ಪರಿಹರಿಸುವ ಉದ್ದೇಶದಿಂದ ಶಾಸಕರು ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Translate »