ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ
ಕೊಡಗು

ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ

August 5, 2018

ವಿರಾಜಪೇಟೆ: ಹಿಂದು ಜಾಗರಣಾ ವೇದಿಕೆ ವಿರಾಜಪೇಟೆ ತಾಲೂಕು ವತಿಯಿಂದ 72 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಮೀಪದ ಅಮ್ಮತ್ತಿ ಕೊಡವ ಸಮಾಜದ ಸಭಾಂಗಣದಲ್ಲಿ ಆ.5 ರಂದು (ನಾಳೆ) ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಆಚರಿಸಲಾಗುವುದು ಎಂದು ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮೇವಡ ಅಯ್ಯಣ್ಣ ತಿಳಿಸಿದ್ದಾರೆ.

ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಖಂಡ ಭಾರತ ಸಂಕಲ್ಪ ದಿನದ ಸಭೆಯ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲೂಕು ಸಂಘ ಚಾಲಕ್ ಕುಟ್ಟಂಡ ಪ್ರಿನ್ಸ್ ಗಣಪತಿ ವಹಿಸಲಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕರ್ನಾಟಕ ದಕ್ಷೀಣ ಪ್ರಾಂತ್ಯ ಕಾರ್ಯದರ್ಶಿ ರಾಧಾಕೃಷ್ಣ ಅಂಡ್ಯಾತಾಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಎಂದರು.

ಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಅಲ್ಲುಮಾಡ ಶರತ್, ವಿರಾಜಪೇಟೆ ನಗರ ಅಧಕ್ಷ ಜೆ.ಪಿ ಅರುಣ್, ಉಪಾಧ್ಯಕ್ಷ ಟಿ.ಕೆ ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಬಿ.ಎನ್.ಯೋಗೇಶ್, ಅಮ್ಮತ್ತಿ ಘಟಕದ ಅಧ್ಯಕ್ಷ ಸಿ.ಕೆ. ರವಿ ಉಪಸ್ಥಿತರಿದ್ದರು.

Translate »