ಇಂದು ಕನ್ನಡ ರಾಜ್ಯೋತ್ಸವ, ವಿವಿಧ ಸ್ಪರ್ಧೆಗಳು
ಕೊಡಗು

ಇಂದು ಕನ್ನಡ ರಾಜ್ಯೋತ್ಸವ, ವಿವಿಧ ಸ್ಪರ್ಧೆಗಳು

November 28, 2018

ಮಡಿಕೇರಿ: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಸ್ಪರ್ಧೆಗಳು £ವೆಂಬರ್ 28 ರಂದು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ನ.28ರಂದು ಬೆಳಗ್ಗೆ 10 ಗಂಟೆಗೆ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ, ನಂತರ ಕಲಾಕ್ಷೇತ್ರದ ಮುಂಭಾಗ ಕನ್ನಡ ಧ್ವಜಾರೋಹಣ, 10.30 ಗಂಟೆಗೆ ಉದ್ಘಾ ಟನಾ ಕಾರ್ಯಕ್ರಮ ನಡೆಯಲಿದೆ. ನಗರ ಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್.ಮಚ್ಚಾಡೋ, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಅವನಿಜ ಸೋಮಯ್ಯ, ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಸಮಾ ರೋಪ ಸಮಾರಂಭ ನಡೆಯಲಿದೆ. ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಇತರರು ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Translate »