ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮೈಸೂರು,ಡಿ.28-ಮೈಸೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಬೆಳಗೊಳ ಯಂತ್ರಾಗಾರದಲ್ಲಿ ವಿದ್ಯುತ್ ವ್ಯತ್ಯಯದಿಂದ ನೀರನ್ನು ಪಂಪ್ ಮಾಡಲು ಸಾಧ್ಯವಾಗದ ಕಾರಣ ಡಿ.29 ಮತ್ತು 30ರಂದು ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಯಾದವಗಿರಿ, ಬನ್ನಿ ಮಂಟಪ ಎ.ಬಿ.ಸಿ. ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀ ಶ್ವರನಗರ, ತಿಲಕ್‍ನಗರ, ಬಡೇಮಕಾನ್, ಹಲೀಂನಗರ, ದೇವ ರಾಜ ಮೊಹಲ್ಲಾ ಭಾಗಶಃ, ನಜರ್‍ಬಾದ್ ಮೊಹಲ್ಲಾ, ವಿದ್ಯಾರಣ್ಯ ಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ಲೂರ್ದ್‍ನಗರ, ಮೀನಾ ಬಜಾರ್, ವಾರ್ಡ್ ಸಂಖ್ಯೆ: 8, 17, 18, 19, 23ರಿಂದ 27ರವರೆಗೆ, 40, 41, 55, 60, 61, 62 ಹಾಗೂ ಮೇಟಗಳ್ಳಿ ಮತ್ತು ಹೆಬ್ಬಾಳು ಕೈಗಾರಿಕಾ ಪ್ರದೇಶ ಸೇರಿದಂತೆ ಹಲವೆಡೆ ನೀರು ಸರಬರಾಜಲ್ಲಿ ವ್ಯತ್ಯಯ ವಾಗಲಿದೆ ಎಂದು ವಾಣಿವಿಲಾಸ ವಾಟರ್ ವಕ್ರ್ಸ್ ಪ್ರಕಟಣೆ ತಿಳಿಸಿದೆ.