ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು

ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ

May 15, 2020

ಮೈಸೂರು,ಮೇ 14-ಮೈಸೂರು ನಗರಕ್ಕೆ ನೀರು ಸರಬರಾಜು ಮಾಡುವ ಬೆಳಗೊಳ, ಹೊಂಗಳ್ಳಿ ಯಂತ್ರಾಗಾರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಮೇ 15 ಮತ್ತು 16ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಾರ್ಡ್ ನಂ.1ರಿಂದ 6, ವಾರ್ಡ್ ನಂ.20, 23, 38, ವಾರ್ಡ್ ನಂ. 42ರಿಂದ 45, ವಾರ್ಡ್ ನಂ.47ರ ವ್ಯಾಪ್ತಿಯ ಡಿಎಂಎ ಪ್ರದೇಶಗಳಾದ ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿ ನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1, 3ನೇ ಹಂತ, ಗೋಕುಲಂ 1, 2, 3ನೇ ಹಂತ ಹಾಗೂ ಹೊರವಲಯಗಳಾದ ಆರ್‍ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರನಗರ, ತಿಲಕ್‍ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ ಭಾಗಶಃ ಎನ್.ಆರ್. ಮೊಹಲ್ಲಾ ಭಾಗಶಃ ಪ್ರದೇಶಗಳು, ನಜರ್‍ಬಾದ್, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿ ಪುರಂ, ಜನತಾನಗರ, ಕೆಹೆಚ್‍ಬಿ ಕಾಲೋನಿ, ಹೂಟಗಳ್ಳಿ, ವಿಜಯನಗರ 2ನೇ ಹಂತ ಹಾಗೂ ಇತರ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

Translate »