ನಾಳೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೈಸೂರು

ನಾಳೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

September 8, 2018

ಮೈಸೂರು:  ಹಿರಿಯ ರಾಜಕಾರಣಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರ 71ನೇ ಹುಟ್ಟುಹಬ್ಬದ ಅಂಗ ವಾಗಿ ಸೆ.9ರಂದು ಬೆಳಿಗ್ಗೆ ಮೈಸೂರಿನ ಎಸ್‍ಆರ್‍ಎಸ್ ಹೂಟ ಗಳ್ಳಿಯ ಹೊಸ ಕೆಇಬಿ ಕಚೇರಿ ಎದುರು ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವ್ಯವಸ್ಥಾಪಕ ಅವಿನಾಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದೇ ದಿನ ಅಪೋಲೋ ಡಯಾಗ್ನೊಸ್ಟಿಕ್ ಸೆಂಟರ್ ಮತ್ತು ಸ್ವಾಸ್ಥ್ಯ ಹೆಲ್ತ್‍ಕೇರ್ ಕೇಂದ್ರವನ್ನು ಮಾಜಿ ಸಚಿವ ವಿ.ಶ್ರೀನಿ ವಾಸಪ್ರಸಾದ್ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು. ಸಂಸದ ಪ್ರತಾಪ್‍ಸಿಂಹ, ಬಿಜೆಪಿ ಚಾಮರಾಜ ನಗರ ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನಪ್ಪ, ಮೈಸೂರು ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ಶಾಸಕರಾದ ಎಸ್.ಎ.ರಾಮದಾಸ್, ಮಾಜಿ ಮೇಯರ್ ಪುರುಷೋತ್ತಮ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಹರೀಶ್, ರಾಜಶೇಖರ್, ಮಂಜುನಾಥಬಾಬು, ರಮೇಶ್ ಉಪಸ್ಥಿತರಿದ್ದರು.

Translate »