ನಾಳೆ ಪದವಿ ಪ್ರದಾನ ಸಮಾರಂಭ

ಮೈಸೂರು: ಮೈಸೂರಿನ ಅಮೃತ ವಿಶ್ವವಿದ್ಯಾಪೀಠಂ ಆವರಣದಲ್ಲಿ ಸೆ. 19ರಂದು ಮಧ್ಯಾಹ್ನ 2 ಗಂಟೆಗೆ ಪದವಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಜೈವಿಕ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಉದಯ್ ಮೈತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಗೌರವ ಅತಿಥಿಗಳಾಗಿ ಜಿ.ಪಂ. ಸಿಇಓ ಶ್ರೀಮತಿ ಕೆ.ಜ್ಯೋತಿ ಪಾಲ್ಗೊಳ್ಳಲಿದ್ದಾರೆ. ಕಾರ್ಯ ಕ್ರಮದಲ್ಲಿ 335 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಇದೇ ಸಂದರ್ಭದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸ ಲಾಗುವುದು ಎಂದು ಪ್ರಾಂಶುಪಾಲ ಪ್ರೊ. ವಿದ್ಯಾ ಪೈ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.