ನಾಳೆ ಕೆಎಎಸ್, ಎಫ್‍ಡಿಎ ಪರೀಕ್ಷೆಗಳ ಆನ್‍ಲೈನ್ ತರಬೇತಿ ಶಿಬಿರ ಸಮಾರೋಪ

ಮೈಸೂರು, ಆ.10(ಆರ್‍ಕೆಬಿ)- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾ ತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಹಾಗೂ ಇತರೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2 ತಿಂಗಳ ಆನ್‍ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಆ.12ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದಲೇ ಆನ್‍ಲೈನ್‍ನಲ್ಲಿ ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

ಕರಾಮುವಿ ಕುಲಪತಿ ಪೆÇ್ರ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸ ಲಿದ್ದು, 190 ಪುಟದ ಮುಕ್ತ ಭಂಡಾರ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡುವರು. ಗ್ರಾಮೀಣ ಮೂಲಭೂತ ಅಭಿವೃದ್ಧಿ ನಿಗಮದ ಮುಖ್ಯ ಆಡಳಿತಾಧಿ ಕಾರಿ ಎ.ಎಂ.ಯೋಗೀಶ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಬಸವರಾಜು ಭಾಗವಹಿಸುವರು ಎಂದು ಕುಲಸಚಿವ ಪೆÇ್ರ. ಲಿಂಗರಾಜಗಾಂಧಿ ತಿಳಿಸಿದ್ದಾರೆ.

2011ರಲ್ಲಿ ಆರಂಭಗೊಂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಹಲವು ತರಬೇತಿಗಳನ್ನು ಆಯೋಜಿಸುತ್ತಾ ಬಂದಿದೆ. ಅದರಲ್ಲಿ ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳ ತರಬೇತಿಯೂ ಸೇರಿದೆ. ಕೊರೊನಾ ಕಾರಣದಿಂದ ಆಯೋಜಿಸಿದ್ದ 60 ದಿನಗಳ ಆನ್‍ಲೈನ್ ತರಬೇತಿಯೂ ಮುಗಿದಿದೆ ಎಂದು ತಿಳಿಸಿದ್ದಾರೆ. ಕಳೆದ ಜೂ.10ರಂದು ಕೆಎಎಸ್ ಪರೀಕ್ಷಾ ತರಬೇತಿ ಶಿಬಿರ ಪ್ರಾರಂಭ ವಾಯಿತು. ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ತರಬೇತಿಯನ್ನು ಉದ್ಘಾಟಿಸಿದ್ದರು. ಪ್ರಸ್ತುತ ಆನ್‍ಲೈನ್‍ನಲ್ಲಿ 60 ದಿನಗಳ ತರಬೇತಿ ಆ.12ರಂದು ಮುಕ್ತಾಯಗೊಳ್ಳಲಿದೆ. ಕೆಎಎಸ್ ಮತ್ತು ಇತರೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ವಿವಿಧ ಜಿಲ್ಲೆ ಗಳಿಂದ 450 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.