ನಾಳಿನ SSLC ಪೂರಕ ಪರೀಕ್ಷೆ ಮುಂದೂಡಿಕೆ
ಮೈಸೂರು

ನಾಳಿನ SSLC ಪೂರಕ ಪರೀಕ್ಷೆ ಮುಂದೂಡಿಕೆ

September 27, 2020

ಬೆಂಗಳೂರು, ಸೆ.26- ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂದೆ ಗಳನ್ನು ವಿರೋಧಿಸಿ ಸೆ.28ಕ್ಕೆ ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆ ಯಲ್ಲಿ ಸೆ.28ರಂದು ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು (ಶನಿ ವಾರ) ಸುತ್ತೋಲೆ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರ ಡಿಸಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಸೆ.28ರಂದು ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆ ಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಇತರೆ ಪರೀಕ್ಷೆ ಗಳು ನಿಗದಿಯಂತೆ ನಡೆಯಲಿದೆ.

 

 

Translate »