ರಾಜ್ಯದಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಯೋಜನೆ ಸಮರ್ಪಕ ಜಾರಿ: ಕೇಂದ್ರ ಮೆಚ್ಚುಗೆ
ಮೈಸೂರು

ರಾಜ್ಯದಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಯೋಜನೆ ಸಮರ್ಪಕ ಜಾರಿ: ಕೇಂದ್ರ ಮೆಚ್ಚುಗೆ

September 4, 2020

ಬೆಂಗಳೂರು, ಸೆ.3(ಕೆಎಂಶಿ)-ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಪುರಸ್ಕøತ ಹಾಗೂ ರಾಜ್ಯ ಸರ್ಕಾರದ ಯೋಜನೆ ಗಳನ್ನು ಪರಿಶಿಷ್ಟ ಪಂಗಡ ಗಳ ಕಲ್ಯಾಣ ಇಲಾಖೆಯು ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿದೆ. ಬುಡಕಟ್ಟು ಸಮುದಾಯದ ಏಳಿಗೆಗೆ ಪೂರಕವಾಗಿ ಮತ್ತಷ್ಟು ಯೋಜನೆ ಗಳನ್ನು ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಕೇಂದ್ರ ಬುಡಕಟ್ಟು ಸಚಿವರಿಗೆ ತಿಳಿಸಿದರು.

ಕೇಂದ್ರ ಬುಡಕಟ್ಟು ಸಚಿವÀ ಅರ್ಜುನ್ ಮುಂಡ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ರಾಜ್ಯ ಸರ್ಕಾರವು ಅನುಷ್ಠಾನ ಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದ ಡಿಸಿಎಂ, ಬುಡಕಟ್ಟು ಜನರು ವಾಸಿಸುವ ಅರಣ್ಯ ಪ್ರದೇಶಗಳಲ್ಲಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕದ 10 ಸಂಚಾರಿ ಆರೋಗ್ಯ ಘಟಕಗಳನ್ನು ಪ್ರಾರಂಭಿಸಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಸಮು ದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಆರೋಗ್ಯ ಅರಿವು ಮೂಡಿ ಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ.

ರಾಜ್ಯದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ಸಮು ದಾಯ ಆರೋಗ್ಯ ಕೋಶದಡಿ ಬುಡಕಟ್ಟು ಆರೋಗ್ಯ ಘಟಕ ವನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿರುವ 10 ವೈದ್ಯಕೀಯ ಮಹಾವಿದ್ಯಾಲಯ ಅಥವಾ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರ್ಮಶಾಲೆ ಪ್ರಾರಂಭಿಸಿ, ಆದಿವಾಸಿ ಆರೋಗ್ಯ ಕಾರ್ಯಕರ್ತ ರನ್ನು ನೇಮಿಸಲಾಗುವುದು. ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿಗಳನ್ನು ದಾಖಲೀಕರಣ ಮತ್ತು ಆಯ್ದ ಔಷಧಿಗಳ ತಯಾರಿಕೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸ ಲಾಗುವುದು. ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಡಿ ಲ್ಯಾಂಪ್ಸ್ ಸಹಕಾರ ಸಂಘ ಗಳಿಗೆ ನೆರವು ನೀಡಲಾಗುವುದು. 19 ಪ್ರಧಾನ ಮಂತ್ರಿ ವನ-ಧನ ಕೇಂದ್ರ (ಪಿಎಂವಿಡಿವಿಕೆ)ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಬುಡಕಟ್ಟು ಜನರು ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧಿಸಿ ಮಾರುಕಟ್ಟೆ ಒದಗಿಸಲು ಮೈಸೂರಿನ ಸಿಎಫ್‍ಟಿಆರ್‍ಐ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರ ಜ್ಞಾನ ಮಂಡಳಿಯೊಂದಿಗೆ ನಾನ್ ಟಿಂಬರ್ ಫಾರೆಸ್ಟ್ ಪ್ರೊಡೆಕ್ಟ್ ಕಲೆಕ್ಟರ್ ಎಂಟರ್‍ಪ್ರೈಸಸ್ ಅನ್ನು ಸ್ಥಾಪಿಸಲಾಗುತ್ತಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗಪುರ ಬಳಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಗೊಂಡ 228 ಕುಟುಂಬಗಳ ರೈತ ಉತ್ಪಾದಕರ ಸಂಸ್ಥೆ ಸ್ಥಾಪಿಸಲು ಸಮೀಕ್ಷೆ ಕಾರ್ಯ ನಡೆಯುತ್ತಿದೆ. 2667 ಕುಟುಂಬಗಳಿಗೆ ಹೈನು ಗಾರಿಕೆ, ಕುರಿ, ಮೇಕೆ, ಗೂಡ್ಸ್ ವಾಹನ ಸೇರಿದಂತೆ ಇತರ ಜೀವನೋಪಾಯ ಕಾರ್ಯಕ್ರಮಗಳಿಗೆ 21 ಕೋಟಿ ರೂ. ನೆರವು ನೀಡಲಾಗಿದೆ. ಬಿಳಿಗಿರಿರಂಗನ ಬೆಟ್ಟದಲ್ಲಿನ ಅರಣ್ಯ ಹಕ್ಕು ಅಧಿ ನಿಯಮದಡಿ ಹಕ್ಕುಪತ್ರ ಪಡೆದಿರುವ 448 ಕುಟುಂಬಗಳು ಇಲಾಖೆಯ ನೆರವಿನೊಂದಿಗೆ ರೈತ ಉತ್ಪಾದನಾ ಸಂಸ್ಥೆಯನ್ನು ಸ್ಥಾಪಿಸಿ, ಕಾಫಿ ಬೋರ್ಡ್‍ನ ತಾಂತ್ರಿಕ ಸಹಾಯದಿಂದ ಕಾಫಿ ಮತ್ತು ಮೆಣಸು ಬೆಳೆಗಳಿಗೆ ಪ್ರೋತ್ಸಾಹಿಸಿ ಈ ಕುಟುಂಬಗಳ ಆದಾಯವನ್ನು ಶೇ.16ರಿಂದ ಶೇ.43ರಷ್ಟು ಅಭಿವೃದ್ಧಿಪಡಿಸ ಲಾಗಿದೆ ಎಂದರು. ರಾಜ್ಯ ಸರ್ಕಾರವು ಬುಡಕಟ್ಟು ಸಮುದಾಯ ದವರಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು ಅತ್ಯುತ್ತಮ ವಾಗಿವೆ ಎಂದು ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಸಂಗಪ್ಪ ಸಂವಾದದಲ್ಲಿ ಪಾಲ್ಗೊಂಡಿದ್ದರು.

Translate »