ಸಲಗ ದಾಳಿ: ವ್ಯಕ್ತಿಗೆ ಗಾಯ
ಮೈಸೂರು

ಸಲಗ ದಾಳಿ: ವ್ಯಕ್ತಿಗೆ ಗಾಯ

January 23, 2020

ಹನಗೂಡು, ಜ.22- ಒಂಟಿ ಸಲಗ ದಾಳಿಗೆ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಾಗರಹೊಳೆಯ ಮತ್ತಿಗೋಡು ಅರಣ್ಯ ವಲಯದ ನೇರಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶಂಕರ್(50) ಗಾಯಗೊಂಡವರು. ಇಂದು ಬೆಳಿಗ್ಗೆ ಬಾಲಕೃಷ್ಣ ಎಂಬುವರು ತೋಟದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಶಂಕರ್ ಕುಳಿತಿದ್ದರು. ಈ ವೇಳೆÀ ಏಕಾಏಕಿ ಬಂದ ಸಲಗ ಕಾರಿನ ಮೇಲೆ ದಾಳಿ ನಡೆಸಿದೆ. ಇದರಿಂದ ಕಾರಿನಲ್ಲಿದ್ದ ಶಂಕರ್ ಅವರ ಬಲಗಾಲಿಗೆ ತೀವ್ರ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾರಿಯಾಗಿ ದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಂಕರ್‍ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾರದಿಂದ ಒಂಟಿ ಸಲಗವೊಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿ ಗೋಡು ಅರಣ್ಯ ವಲಯದ ಗ್ರಾಮಗಳಿಗೆÉ ದಾಳಿ ಇಡುತ್ತಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಜಾನುವಾರುಗಳು ಸೇರಿದಂತೆ ನಾಲ್ವರ ಮೇಲೆ ದಾಳಿ ನಡೆಸಿದ್ದು, ಮನೆಯನ್ನು ಕೆಡವಿ ಹಾಕಿದೆ. ವಿಷಯ ತಿಳಿದರೂ ಅರಣ್ಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಲಗದ ಸೆರೆಗೆ ಕ್ರಮಕೈಗೊಳ್ಳದಿದ್ದರೆ ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

 

 

 

 

Translate »