ವಿದ್ಯುತ್ ತಂತಿ ತುಳಿದು ಇಬ್ಬರು ಸಾವು

ಆಲೂರು:  ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಯರಕೊಪ್ಪಲು ಬಳಿ ನಡೆಸಿದೆ. ನಟರಾಜ್(35), ಕುಮಾರ್ (48) ಎಂಬುವರು ಮೃತಪಟ್ಟವರು. ಜಮೀನಲ್ಲಿ ಕೆಲಸ ಮಾಡುವಾಗ ತುಂಡಾಗಿ ಬಿದ್ದಿದ್ದ ತಂತಿ ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.