ಬೆಂಗಳೂರು, ಅ.19-ಕೃಷಿ ಕ್ಷೇತ್ರದಲ್ಲಿ ನಿರಂತರ ವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು. ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರ ವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆ ತಗ್ಗಿಸಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಕರೆ ನೀಡಿದ್ದಾರೆ.
ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಆಶ್ರಯ ದಲ್ಲಿ ಸಂಘಟಿಸಲಾಗಿರುವ “ಸಿಐಐ ಆಗ್ರೋ & ಫುಡ್ ಟೆಕ್ 2020” ವರ್ಚುವಲ್ ಕಾನ್ಫರೆನ್ಸ್ ಉದ್ದೇಶಿಸಿ ಬೆಂಗ ಳೂರಿನಿಂದ ಮಾತನಾಡಿದ ಸಚಿವರು, `ದೀರ್ಘಕಾಲ ದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಯ್ದುಕೊಳ್ಳಲು ಸಾವಯವ ಕೃಷಿ ಅನಿವಾರ್ಯ’ ಎಂದರು.
ರೈತರಿಗೆ ಬೇಸಾಯ ಮಾಡಲು ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ನೀರು ಮುಂತಾದ ಮೂಲ ಅವ ಶ್ಯಕತೆಗಳು ಹಾಗೂ ಬೇಸಾಯವನ್ನು ಸುಲಭಗೊಳಿ ಸುವ ತಂತ್ರಜ್ಞಾನವನ್ನು ಒದ ಗಿಸುವಲ್ಲಿ ಕೇಂದ್ರ ಸರ್ಕಾರ ದೊಂದಿಗೆ ಖಾಸಗಿ ಕಂಪನಿ ಗಳು ಸಕ್ರಿಯವಾಗಿ ಕೈಜೋ ಡಿಸುವುದು ಅವಶ್ಯಕವಾಗಿದೆ. ಕೃಷಿಗೆ ಪೂರಕ ವಾತಾವರಣ ಮೂಡಿಸುವ ಹೊಣೆಗಾರಿಕೆ ಸರ್ಕಾರ ಹಾಗೂ ಖಾಸಗಿ ವಲಯ ಎರಡರ ಮೇಲೂ ಇದೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯ ದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾವ ಲಂಬನೆ ಗಳಿಸುವಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೆÇಟ್ಯಾಶ್ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ ಶೇ.80ರಷ್ಟು ಯೂರಿಯಾ ದೇಶದಲ್ಲಿಯೇ ಉತ್ಪಾದನೆ ಮಾಡುತ್ತಿ ದ್ದೇವೆ. ಫಾಸ್ಫೆಟಿಕ್ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ. ರಸಗೊಬ್ಬರಕ್ಕೆ ಅಗತ್ಯ ವಾದ ಕಚ್ಚಾ ವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸ ಲಾಗುತ್ತಿದೆ. ವಿದೇಶಿ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿ ಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ವಿವರಿಸಿದರು.
ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿ ಕೊಂಡಿದೆ. ರೈತರಿಗೆ ದೊರೆಯುವ ರಿಯಾ ಯಿತಿ ಸೋರಿಕೆಯಾಗದಂತೆ ತಡೆಯಲು ನೇರ ನಗದು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳ ವಡಿಸಿಕೊಳ್ಳಲಾಗಿದೆ. ಮೇಲಿಂದ ಮೇಲೆ ಈ ತಂತ್ರಾಂಶ /ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು, ಗವರ್ನನ್ಸ್ ಡಿಜಿಟಲ್ ಟ್ರಾನ್ಸಫಾರ್ಮೇಷನ್ ಅವಾರ್ಡ್ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸಚಿವರು ತಿಳಿಸಿದರು. ಸಿಐಐ ಟೆಕ್ ಮೇಳದ ಅಧ್ಯಕ್ಷ ಅಜಯ್ ಎಸ್. ಶ್ರೀರಾಮ್, ಸಮ್ಮೇಳನದ ಸಂಚಾಲಕ ಡಾ.ಅರವಿಂದ್ ಕಪೂರ್, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್ ಮುಂತಾದವರು ಪಾಲ್ಗೊಂಡಿದ್ದರು.