ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

August 2, 2018

ಚಾಮರಾಜನಗರ:  ಜಿಲ್ಲೆಯ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿ ಕಾರಿಗಳು ಆಗಸ್ಟ್ 6 ರಿಂದ 29ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಆಯಾ ತಾಲೂಕಿನ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.
ಆಗಸ್ಟ್ 6ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, ಆಗಸ್ಟ್ 14ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.

ಆಗಸ್ಟ್ 20ರಂದು ಯಳಂದೂರು, 24ರಂದು ಕೊಳ್ಳೇಗಾಲ ಹಾಗೂ 29ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳು ವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Translate »