ಮತದಾರರ ಪಟ್ಟಿ ಪರಿಷ್ಕರಣೆ; ಜಿಲ್ಲೆಯಲ್ಲಿ 4,34,256 ಮತದಾರರು
ಕೊಡಗು

ಮತದಾರರ ಪಟ್ಟಿ ಪರಿಷ್ಕರಣೆ; ಜಿಲ್ಲೆಯಲ್ಲಿ 4,34,256 ಮತದಾರರು

January 16, 2019

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರ ವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮತ ದಾರರ ಪಟ್ಟಿಯಲ್ಲಿ ಒಟ್ಟು 4,34,256 ಮತದಾರರಿದ್ದಾರೆ. ಹೊಸದಾಗಿ 5,444 ಮತದಾರರು (2502 ಪುರುಷರು ಹಾಗೂ 2942 ಮಹಿಳೆಯರು) ಸೇರ್ಪಡೆಯಾಗಿ ದ್ದಾರೆ. ಜೊತೆಗೆ 6,449 ಮತದಾರರನ್ನು (ಮೃತ, ಸ್ಥಳಾಂತರ ಮತ್ತು ಪುನರಾವರ್ತನೆ ಗೊಂಡಿರುವ ಕಾರಣಗಳಿಂದ) ಮತದಾ ರರ ಪಟ್ಟಿಯಿಂದ ಕೈಬಿಡಲಾಗಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿ ವಾಸ್ ಮಾಹಿತಿ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಲೋಕಸಭಾ ಚುನಾವಣಾ ಹಿನ್ನೆಲೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಮತದಾರರ ಪಟ್ಟಿಯಲ್ಲಿ ಎಲ್ಲಾ ಅರ್ಹ ಮತದಾರರು ಪಟ್ಟಿ ಪರಿಶೀಲಿಸಿಕೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಖಚಿತ ಪಡಿಸಿ ಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದರು.

ಅರ್ಹ ನಾಗರಿಕರ ಹೆಸರು ಸೇರ್ಪಡೆ ಯಾಗದೆ ಇದ್ದಲ್ಲಿ ಈಗಲೂ ಸಹ ನಮೂನೆ 6 ರಲ್ಲಿ
ಅರ್ಜಿಯನ್ನು ನಿಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲೂಕು ಕಚೇರಿಗೆ ಸಲ್ಲಿಸಬಹುದು. ಹಾಗೆಯೇ ಮೃತ, ಸ್ಥಳಾಂತರ, ಪುನ ರಾವರ್ತನೆ ಆಗಿರುವ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ತೆಗೆಯಲು ನಮೂನೆ 7ರಲ್ಲಿ ಅರ್ಜಿ ಯನ್ನು ಬೂತ್ ಮಟ್ಟದ ಅಧಿಕಾರಿಗಳಿಗೆ ಹಾಗೂ ತಾಲೂಕು ಕಚೇರಿಗೆ ಸಲ್ಲಿಸಬ ಹುದಾಗಿದೆ ಎಂದು ವಿವರಿಸಿದರು.

ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಜನವರಿ 25 ರಂದು ಮತದಾರರ ದಿನಾಚರಣೆಯನ್ನು ಪ್ರತಿ ಬೂತ್ ಮಟ್ಟದಲ್ಲಿ, ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳ ಲಾಗುವುದು. ಈ ದಿನದಂದು ಹೊಸ ದಾಗಿ ಸೇರ್ಪಡೆಯಾಗಿರುವ ಯುವ ಮತ ದಾರರಿಗೆ ಮತದಾರರ ಗುರುತಿನ ಚೀಟಿ ನೀಡಿ ಸನ್ಮಾನಿಸಲಾಗುವುದು ಎಂದರು.

ಭಾರತ ಚುನಾವಣಾ ಆಯೋಗವು ಪ್ರತಿ ಜಿಲ್ಲೆಯಲ್ಲೂ District Contact Centre toll free 1950 (Voters Helpline) ಸ್ಥಾಪಿಸಲಾಗಿದೆ. ಈ ಕೇಂದ್ರವು ಬೆಳಗ್ಗೆ 9 ರಿಂದ ರಾತ್ರಿ 9 ಗಂಟೆಯ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದರು. ಮತ ದಾರರು ಮತದಾರರ ಪಟ್ಟಿ ಬಗ್ಗೆ, ಮತ ಗಟ್ಟೆ ಬಗ್ಗೆ ತಿಳಿದುಕೊಳ್ಳಲು ಮತ್ತು ಚುನಾವಣೆ ಸಮಯದಲ್ಲಿ ದೂರುಗಳನ್ನು ನೀಡಲು 1950ಕ್ಕೆ ಕರೆ ಮಾಡಬಹು ದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.

ರಾಜಕೀಯ ಪಕ್ಷಗಳ ಪ್ರಮುಖ ರೊಂದಿಗೆ ಸಭೆ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂ ಧಿಸಿದಂತೆ ಅಂತಿಮ ಮತದಾರರ ಪಟ್ಟಿ ಯನ್ನು ಪ್ರಕಟಿಸಲಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ ಕೀಯ ಪಕ್ಷಗಳ ಪ್ರಮುಖರಾದ ಸಜೀಲ್ ಕೃಷ್ಣ(ಬಿಜೆಪಿ), ತೆನ್ನೀರ ಮೈನಾ (ಕಾಂಗ್ರೆಸ್), ಅಜಿತ್ ಕುಮಾರ್ (ಜೆಡಿಎಸ್), ಅಪ್ಪಣ್ಣ, ಶಾಮರಾಜ್ ಇತರರು ಇದ್ದರು. ಮತ ದಾರರ ಪಟ್ಟಿ ಪರಿಷ್ಕರಣೆ ಸಂಬಂಧಿ ಸಿದಂತೆ ಪರಿಶೀಲಿಸಿಕೊಳ್ಳುವಂತಾಗಬೇಕು. ಯಾರಾದರು ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ ಮಾಡಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು. ರಾಜಕೀಯ ಪಕ್ಷಗಳ ಮುಖಂಡರು ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು.

Translate »