ವಿಶ್ವ ಹೃದಯ ದಿನಾಚರಣೆ ಅಂಗವಾಗಿ  ಅ.7ರಂದು ಕಾಲ್ನಡಿಗೆ ಜಾಗೃತಿ ಜಾಥಾ
ಮೈಸೂರು

ವಿಶ್ವ ಹೃದಯ ದಿನಾಚರಣೆ ಅಂಗವಾಗಿ  ಅ.7ರಂದು ಕಾಲ್ನಡಿಗೆ ಜಾಗೃತಿ ಜಾಥಾ

October 5, 2018

ಮೈಸೂರು:  ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಕಾರ್ಡಿ ಯಾಲಜಿ ಸೊಸೈಟಿ ಆಫ್ ಇಂಡಿಯಾದ ಮೈಸೂರು ಶಾಖೆ ವತಿಯಿಂದ ಅ.7ರಂದು ಬೆಳಿಗ್ಗೆ 8 ಗಂಟೆಗೆ ಕಾಲ್ನಡಿಗೆ ಜಾಗೃತಿ ಜಾಥಾ ಹಮ್ಮಿ ಕೊಳ್ಳಲಾಗಿದೆ ಎಂದು ಶಾಖೆಯ ಕಾರ್ಯದರ್ಶಿ ಡಾ.ಎಂ.ಕೆ.ಎಸ್.ರಾಜಿತ್ ಮೈಸೂರು ಜಿಲ್ಲಾ ಪತ್ರ ಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಶ್ವದ ನಂ.1 ಕಾಯಿಲೆ ಎನಿಸಿರುವ ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿ ವರ್ಷ 1.5 ಕೋಟಿ ಜನರು ಬಳಲುತ್ತಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲೆಂದೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾಥಾ ಜೆ.ಕೆ.ಮೈದಾನದಿಂದ ಆರಂಭವಾಗಿ ಜೆಎಲ್‍ಬಿ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಮತ್ತೆ ಜೆ.ಕೆ.ಮೈದಾನ ದಲ್ಲಿಯೇ ಅಂತ್ಯಗೊಳ್ಳಲಿದೆ ಎಂದರು. ಅಂದೇ ಬೆಳಿಗ್ಗೆ 10 ಗಂಟೆಗೆ ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೃದಯದ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸಲಾಗುವುದು. ರಾಜವಂಶಸ್ಥ ಯದು ವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, `ಮೈಸೂರು ಮಿತ್ರ’ ಸಂಪಾದಕ ಕೆ.ಬಿ. ಗಣಪತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಖೆ ಅಧ್ಯಕ್ಷ ಡಾ.ಹರ್ಷ ಬಸಪ್ಪ, ಖಜಾಂಚಿ ಡಾ.ಜೆ.ವೇಣು ಉಪಸ್ಥಿತರಿದ್ದರು.

Translate »