ತುಮಕೂರು: ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸಿದ್ಧ ಗಂಗಾ ಮಠದ ವಸತಿ ಶಾಲೆಗೆ ವಿದ್ಯಾರ್ಥಿ ಗಳ ದಾಖಲಾತಿ ಸ್ಥಗಿತಗೊಳಿಸಲಾಗಿದೆ
ಈಗಾಗಲೇ ನೀರಿನ ಸಮಸ್ಯೆ ಗಂಭೀರ ವಾಗಿದೆ. ಹೊಸದಾಗಿ ದಾಖಲಾಗಲು 8 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮತ್ತಷ್ಟು ಅರ್ಜಿಗಳು ಬಂದರೆ ಅವರನ್ನು ದಾಖಲಿಸಿಕೊಳ್ಳಬೇಕಾಗು ತ್ತದೆ. ನೀರಿನ ಸಮಸ್ಯೆ ಕಾರಣಕ್ಕೆ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಸಾಧ್ಯವಾ ಗುತ್ತಿಲ್ಲ. ಆದ್ದರಿಂದ 15 ದಿನ ಮುಂಚೆಯೇ ಅರ್ಜಿ ವಿತರಣೆ ಸ್ಥಗಿತಗೊಳಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವ ನಾಥಯ್ಯ ತಿಳಿಸಿದರು.