ಇಂದು, ನಾಳೆ ಕೆಲವೆಡೆ ನೀರು ಸರಬರಾಜಲ್ಲಿ ವ್ಯತ್ಯಯ

ಮೈಸೂರು: ಮೈಸೂರು ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ ಬೆಳಗೊಳ ಯಂತ್ರಾಗಾರ ಹಾಗೂ ಬೂಸ್ಟರ್ ಯಂತ್ರಾಗಾರದಲ್ಲಿ ತುರ್ತು ಕಾರ್ಯ ನಿರ್ವಹಣೆಯ ಸಲುವಾಗಿ ಫೆ.16ರಂದು ಜನತಾನಗರ, ಕೆ.ಹೆಚ್.ಬಿ. ಕಾಲೋನಿ, ಹೂಟಗಳ್ಳಿ, ವಿಜಯನಗರ 2ನೇ ಹಂತ, ಫೆ.17ರಂದು ವಾರ್ಡ್ ನಂ. 1ರಿಂದ 6, ವಾರ್ಡ್ ನಂ. 20, 23, 38, ವಾರ್ಡ್ ನಂ.42ರಿಂದ 45, ವಾರ್ಡ್ ನಂ. 47ಕ್ಕೆ ಸಂಬಂಧಿಸಿದ ಪ್ರದೇಶಗಳಾದ ಹೆಬ್ಬಾಳ, ಕುಂಬಾರ ಕೊಪ್ಪಲು, ಮಂಚೇಗೌಡನಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1, 3ನೇ ಹಂತ, ಗೋಕುಲಂ 1, 2, 3ನೇ ಹಂತ ಹಾಗೂ ಹೊರ ವಲಯಗಳಾದ ಆರ್‍ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎ, ಬಿ, ಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರ ನಗರ, ತಿಲಕ್‍ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ, ಭಾಗಶಃ, ಎನ್.ಆರ್.ಮೊಹಲ್ಲಾ ಭಾಗಶಃ ಪ್ರದೇಶಗಳು, ನಜರ್‍ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಮುಂತಾದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.