ನಾವೆಲ್ಲಾ ಚರ್ಚಿಸಿಯೇ ನಿರ್ಧರಿಸಿದ್ದೇವೆ: ಸಿದ್ದು
ಮೈಸೂರು

ನಾವೆಲ್ಲಾ ಚರ್ಚಿಸಿಯೇ ನಿರ್ಧರಿಸಿದ್ದೇವೆ: ಸಿದ್ದು

July 13, 2019

ಬೆಂಗಳೂರು, ಜು.12- 16 ಶಾಸಕರ ರಾಜೀನಾಮೆ ಪ್ರಹಸನದ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುಖ್ಯ ಮಂತ್ರಿ ಕುಮಾರಸ್ವಾಮಿ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, “ನಾವೆಲ್ಲಾ ಚರ್ಚಿಸಿಯೇ ವಿಶ್ವಾಸ ಮತಯಾಚನೆಗೆ ನಿರ್ಧರಿಸಿದ್ದೇವೆ. ಬಹುಮತ ಇಲ್ಲದೇ ಸಿಎಂ ವಿಶ್ವಾಸಮತಯಾಚನೆಗೆ ಮುಂದಾಗುತ್ತಾರಾ?’’ಎಂದು ಮಾಧ್ಯಮಗಳಿಗೆ ಪ್ರತಿ ಪ್ರಶ್ನೆ ಹಾಕಿದ್ದಾರೆ. ಮುಂದುವರೆದು “ಸಿಎಂ ಯಾವ ರೀತಿ ವಿಶ್ವಾಸಮತ ಸಾಬೀತುಪಡಿಸುತ್ತಾರೆಂಬುದನ್ನು ಹೇಳುವುದಕ್ಕೆ ಆಗುತ್ತಾ?’’ ಎಂದು ಮತ್ತೆ ಕೇಳಿದ್ದಾರೆ. ಶಾಸಕರ ರಾಜೀನಾಮೆ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರ ರಾಜೀನಾಮೆ ಹಾಗೂ ಅನರ್ಹತೆ ಕುರಿತು ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಎಂಟಿಬಿ ನಾಗರಾಜ್, ಸುಧಾಕರ್ ಮುಂಬೈಗೆ ಹೋಗಿಲ್ಲ, 10 ಜನ ಶಾಸಕರಷ್ಟೇ ಮುಂಬೈಗೆ ಹೋಗಿದ್ದಾರೆ. ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡುತ್ತಿದ್ದೇವೆ  ರೋಷನ್ ಬೇಗ್‍ರನ್ನು ಹೊರತುಪಡಿಸಿ  ಉಳಿದ ಎಲ್ಲರೊಂದಿಗೂ ಮಾತನಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Translate »