ಮೈಸೂರು ಎಸ್ಪಿಗೆ ಪುಷ್ಪವೃಷ್ಟಿಯೊಂದಿಗೆ ಸ್ವಾಗತ
ಮೈಸೂರು

ಮೈಸೂರು ಎಸ್ಪಿಗೆ ಪುಷ್ಪವೃಷ್ಟಿಯೊಂದಿಗೆ ಸ್ವಾಗತ

September 4, 2020

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾದ ಮೈಸೂರು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಸಿ.ಬಿ.ರಿಷ್ಯಂತ್ ಅವರನ್ನು ಸಹೋದ್ಯೋಗಿಗಳು ಪುಷ್ಪವೃಷ್ಟಿ ಮೂಲಕ ಬರಮಾಡಿ ಕೊಂಡರು.

ಸಂಸದ ಪ್ರತಾಪ್ ಸಿಂಹ, ದಕ್ಷಿಣ ವಲಯ ಐಜಿಪಿ ವಿಪುಲ್‍ಕುಮಾರ್, ಎಎಸ್ಪಿ ಶಿವಕುಮಾರ್, ಡಿಎಚ್‍ಒ ಡಾ.ವೆಂಕಟೇಶ್ ಮೊದಲಾದವರು ಇದ್ದರು. ತಮ್ಮ ಕಚೇರಿಯ ಸಿಬ್ಬಂದಿಯೊಬ್ಬರ ಪ್ರಾಥಮಿಕ ಸಂಪರ್ಕದಿಂದಾಗಿ ಪರೀಕ್ಷೆಗೆ ಒಳಗಾದ ರಿಷ್ಯಂತ್ ಅವರಿಗೆ ಆ.18ರಂದು ಕೊರೊನಾ ದೃಢಪಟ್ಚಿತ್ತು.

ನಜರ್‍ಬಾದಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೈದ್ಯರಾದ ಡಾ.ರಘುನಾಥ್, ಡಾ.ಸುಶ್ರುತ್, ಡಾ.ಲಕ್ಷ್ಮಿಕಾಂತ್, ಡಾ.ಶಿಲ್ಪಾ ಸಂತೃಪ್ತ್, ಡಾ.ಭರತ್, ಡಾ.ಸಂತೃಪ್ತ್ ಚಿಕಿತ್ಸೆ ನೀಡಿದ್ದರು.

ಮೈಸೂರು ಜಿಲ್ಲೆಯಲ್ಲಿ 20 ಸಾವಿರದ ಆಸುಪಾಸಿನಲ್ಲಿ ಕೊರೊನಾ ಸೋಂಕಿತರಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದಾಗುವ ಸಾವಿನ ಸಂಖ್ಯೆಯೂ ಕೂಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ.

Translate »