ನಿಮ್ಮ ದುಡ್ಡು ಯಾರಿಗೆ ಬೇಕು, ನಮಗೆ ಶಾಂತಿ ಬೇಕು…
News

ನಿಮ್ಮ ದುಡ್ಡು ಯಾರಿಗೆ ಬೇಕು, ನಮಗೆ ಶಾಂತಿ ಬೇಕು…

July 16, 2022

ಬಾಗಲಕೋಟೆ, ಜು.15-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಇಂದು ಭೇಟಿ ನೀಡಿ ಕೆರೂರುಪಟ್ಟಣ ಹಿಂಸಾಚಾರದಲ್ಲಿ ಗಾಯ ಗೊಂಡವರ ಕುಟುಂಬಸ್ಥ ರಿಗೆ ಪರಿಹಾರ ನೀಡಲು ಹೋದ ವೇಳೆ ಮುಸ್ಲಿಂ ಮಹಿಳೆ ತರಾಟೆ ತೆಗೆದು ಕೊಂಡು ಕೊಟ್ಟ 2 ಲಕ್ಷ ರೂಪಾಯಿ ಹಣವನ್ನು ಅವರ ಕಾರಿನತ್ತ ಎಸೆದ ಪ್ರಸಂಗ ನಡೆದಿದೆ.
ಜುಲೈ 6ರಂದು ಎರಡು ಕೋಮಿನ ಯುವಕರ ಮಧ್ಯೆ, ಯುವತಿಯರನ್ನು ಚುಡಾಯಿಸಿದ ಕಾರಣಕ್ಕೆ ಗಲಾಟೆ ಆರಂಭವಾಗಿ ಅದು ಹಿಂಸಾಚಾರಕ್ಕೆ ತಿರುಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು.

ಹಲವು ವಾಹನಗಳು ಜಖಂಗೊಂಡಿದ್ದವು. ಕೆರೂರು ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಿ ನಿಷೇಧಾಜ್ಞೆ ಹೇರಲಾಗಿತ್ತು. ಘಟನೆಯಲ್ಲಿ ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಗಾಯಗೊಂಡಿದ್ದವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಕುಟುಂಬಸ್ಥರಿಗೆ ಪರಿಹಾರ ಹಣ ನೀಡಲು ಹೋಗಿದ್ದರು. ಹಲ್ಲೆಯಲ್ಲಿ ಗಾಯಗೊಂಡಿದ್ದ ಹನೀಫ್, ರಫೀಕ್ ಸೇರಿದಂತೆ ನಾಲ್ವರಿಗೆ ಸಾಂತ್ವನ ಹೇಳಿ ತಲಾ 50 ಸಾವಿರ ರೂ.ಗಳಂತೆ 2 ಲಕ್ಷ ರೂ. ನೀಡಿದ್ದರು. ಆಗ ರಫೀಕ್ ಸೋದರಿ ರಜ್ಮಾ, ನಮಗೆ ದುಡ್ಡು ಬೇಡ, ನಾವು ಕಷ್ಟಪಟ್ಟು ಕೆಲಸ ಮಾಡಿ ಜೀವನ ನಡೆಸುತ್ತೇವೆ,. ನಮಗೆ ಶಾಂತಿ ಬೇಕು, ನಮ್ಮನ್ನು ನಮ್ಮ ಪಾಡಿಗೆ ಶಾಂತಿಯಿಂದ ಬದುಕಲು ಬಿಡಿ ಎಂದು ಕಾರಿನತ್ತ ಬಿಸಾಕಿದರು. ಸಿದ್ದರಾಮಯ್ಯನವರು ಮಹಿಳೆಯನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಆದರೆ ಮಹಿಳೆಯರು ಸಮಾಧಾನಕ್ಕೆ ಬಗ್ಗಲಿಲ್ಲ. ಮಹಿಳೆಗೆ ಇದು ಸರ್ಕಾರದ ದುಡ್ಡಲ್ಲ, ನಾನು ವೈಯಕ್ತಿಕವಾಗಿ ಕೊಡುತ್ತಿದ್ದೇನೆ ಎಂದು ಹೇಳಿದರೂ ಮಹಿಳೆ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಮಹಿಳೆ ಹೇಳುವುದೇನು: ಘಟನೆ ನಡೆದು ಇಷ್ಟು ದಿನಗಳಾದ ಮೇಲೆ ಬರುತ್ತಿದ್ದಾರೆ, ಅವರ ದುಡ್ಡು ಯಾರಿಗೆ ಬೇಕು, ನಮ್ಮ ಕಷ್ಟ ಕೇಳುವವರು ಯಾರು ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಯಾರ ಪರಿಹಾರವೂ ಬೇಡ. ಈ ರೀತಿಯ ಗಲಭೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕು. ನಮಗೆ ಬಂದ ಪರಿಸ್ಥಿತಿ ಯಾವ ಹಿಂದೂ, ಮುಸ್ಲಿಮರಿಗೂ ಬರಬಾರದು. ಒಂದು ವೇಳೆ ಈ ಘಟನೆಯಲ್ಲಿ ನಮ್ಮದು ತಪ್ಪು ಎಂದು ತಿಳಿದುಬಂದರೆ ಕುಟುಂಬ ಸಮೇತ ನಾವು ಪೆÇಲೀಸರಿಗೆ ಶರಣಾಗುತ್ತೇವೆ ಎಂದು ಸಹ ಮಹಿಳೆಯರು ಹೇಳಿದರು.

Translate »