ಕಾಡಾನೆ ದಾಳಿ: ಫಸಲು ನಾಶ
ಕೊಡಗು

ಕಾಡಾನೆ ದಾಳಿ: ಫಸಲು ನಾಶ

April 23, 2019

ವಿರಾಜಪೇಟೆ: ಸಮೀಪದ ಐಮಂಗಲ ಗ್ರಾಮದ ಕುಂಡ್ರಂಡ ಪೊನ್ನಪ್ಪ [ಕಸ್ತೂರಿ] ಅವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟಕ್ಕೆ ಏ.22 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿ ಕಾಫಿ ಮತ್ತು ಬಾಳೆ ಫಸಲು ಹಾಗೂ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು. ಅರಣ್ಯ ಇಲಾಖೆ ಕಾಡಾನೆಗಳನ್ನು ಕೂಡಲೇ ಕಾಡಿಗೆ ಅಟ್ಟುವಂತೆ ಪೊನ್ನಪ್ಪ ಒತ್ತಾಯಿಸಿದ್ದಾರೆ. ಮನೆಯ ಪಕ್ಕದಲ್ಲಿಯೇ ಬಂದ ಕಾಡಾನೆ ಫಸಲು ಬಿಟ್ಟಿದ್ದ ಬಾಳೆ ಹಾಗೂ ಕಾಫಿ ಬೆಳೆಯನ್ನು ನಾಶ ಮಾಡಿರುವುದರಿಂದ ಇಲಾಖೆ ಪರಿಹಾರ ಒದಗಿಸಬೇಕು. ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಲು ಭಯಭೀತರಾಗಿದ್ದು ಅರಣ್ಯ ಇಲಾಖೆ ಕೂಡಲೇ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Translate »