ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ
ಮೈಸೂರು

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ

January 16, 2019

ಮೈಸೂರು: ಯಡಿ ಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‍ಸಿಂಹ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ರೈಲು ನಿಲ್ದಾಣದಲ್ಲಿ ಚೆನ್ನೈ ಎಕ್ಸ್‍ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಮೂಲಕ ಅಷ್ಟೇ ನನಗೆ ತಿಳಿದಿದೆ ಎಂದರು.
ಕಡಿಮೆ ಶಾಸಕರ ಸಂಖ್ಯೆ ಹೊಂದಿರು ವವರೇ ಅಧಿಕಾರ ಹಿಡಿಯಬೇಕೆನ್ನು ವಾಗ ಅತ್ಯಂತ ಹೆಚ್ಚು ಸೀಟುಗಳನ್ನು ಪಡೆದ ನಾವು ಬಯಸಿದರೆ ತಪ್ಪಾ? ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾದರೆ ನಾವೇ ಸರ್ಕಾರ ಮಾಡು ತ್ತೇವೆ. ಯಡಿಯೂರಪ್ಪ ಮುಖ್ಯಮಂತ್ರಿ ಯಾಗುವುದು ಖಚಿತ ಎಂದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಇದ್ದ ಕಾರಣ ಸಂಸದರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳನ್ನು ದೆಹಲಿಗೆ ಕರೆಸಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿದ ನಂತರ ನಾವೆಲ್ಲರೂ ಬಂದು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸು ತ್ತಿರುವುದನ್ನು ನೀವೇ ನೋಡುತ್ತಿದ್ದೀರಲ್ಲ ಎಂದು ಪ್ರತಾಪ್‍ಸಿಂಹ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಬಿಜೆಪಿಯಿಂದ ಆಪರೇಷನ್ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದ ಅವರು, ನಾವು ಆಮಿಷ ಒಡ್ಡಿ ರುವ ಬಗ್ಗೆ ಹೇಳಿಕೆ ನೀಡಿರುವ ಮುಖ್ಯ ಮಂತ್ರಿಗಳು ಮಾಹಿತಿ ಇದ್ದರೆ ನಿಖರ ವಾಗಿ ಹೇಳಲಿ ಎಂದರು. ಹತಾಶೆ ಯಿಂದ ಜೆಡಿಎಸ್-ಕಾಂಗ್ರೆಸ್‍ನವರು ಬಾಯಿಗೆ ಬಂದಂತೆ ಮಾತನಾಡುತ್ತಿ ದ್ದಾರೆ. ಬದಲಾವಣೆ ಜಗದ ನಿಯ ಮವಲ್ಲವೆ? ಎಂದ ಪ್ರತಾಪ್‍ಸಿಂಹ ರಾಜ್ಯದಲ್ಲೂ ಬದಲಾವಣೆ ಆದರೂ ಆಶ್ಚರ್ಯವಿಲ್ಲ ಎಂದು ನುಡಿದರು.

Translate »