ವರುಣಾ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಮೈಸೂರು

ವರುಣಾ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

March 12, 2020

ಮೈಸೂರು, ಮಾ. 11(ಆರ್‍ಕೆ)- ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ವರುಣಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮೈಸೂರು ತಾಲೂಕು, ಭುಗತ ಗಳ್ಳಿ ನಿವಾಸಿ ಬಸವಣ್ಣ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಂಗಳವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದ ಆತ ಕೆಲ ಸ್ನೇಹಿತರಿಗೆ ಫೋನ್ ಮಾಡಿ ಬೇಸರ ವ್ಯಕ್ತಪಡಿಸಿದ್ದ. ಅಂದು ರಾತ್ರಿ ಮನೆಗೆ ಬಾರದಿದ್ದ ಬಸವಣ್ಣನ ಮೃತದೇಹ ವರುಣಾ ಕೆರೆಯಲ್ಲಿ ಪತ್ತೆಯಾಯಿತು. ಸಾರ್ವಜನಿಕರು ನೀಡಿದ ದೂರಿನನ್ವಯ ಸ್ಥಳಕ್ಕೆ ಧಾವಿಸಿದ ವರುಣಾ ಠಾಣೆ ಪೊಲೀಸರು, ಮಹಜರು ನಡೆಸಿ ಮೃತದೇಹ ಹೊರ ತೆಗೆದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Translate »